ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.

ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm