ಬ್ರೇಕಿಂಗ್ ನ್ಯೂಸ್
03-09-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 03: ಯಶವಂತಪುರ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲಿಂದ ಕಾರೊಂದು ಕೆಳಗೆ ಬಿದ್ದಿದೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದೆ. ಬೆಳಗಿನ ಜಾವ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತಮಿಳುನಾಡು ರಿಜಿಸ್ಟ್ರೇಷನ್ ವೋಲ್ಕ್ ಸ್ವಾಗನ್ ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿತ್ತು. ಫ್ಲೈ ಓವರ್ ಮೇಲ್ಭಾಗದಲ್ಲಿ ಒಂದು ಬೈಕ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ.

ಫ್ಲೈ ಓವರ್ ಮೇಲಿನ ಡಿವೈಡರ್ಗೆ ಬಡಿದು, ಬೈಕ್ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಕಾರು ಬಿದ್ದಿದೆ. ಸ್ಥಳದಲ್ಲಿದ್ದ ಹೊಯ್ಸಳ ಪೊಲೀಸರಿಂದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಮತ್ತು ಪೊಲೀಸರಿಂದ ಅಪಘಾತಕ್ಕೊಳಗಾದವರ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಯ್ಸಳ ಪೊಲೀಸರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಶವಂತಪುರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಬರೀಷ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
One person was killed and four persons severely injured when a speeding car rammed into a bike and plunged down from the Yeshwantpur flyover in Bangaluru on September 3. There were no vehicles below the flyover at the time of the accident, said the police.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm