ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am