ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm