ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm