ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm