ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm