ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm