ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm