ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm