ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm