ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm