ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm