ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm