ಬ್ರೇಕಿಂಗ್ ನ್ಯೂಸ್
12-09-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ತಿಗೊಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರು, ತೀರ್ಪು ಕಾಯ್ದಿರಿಸಿದ್ದು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯ ಪ್ರೇರಿತ. ಸೆಕ್ಷೆನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ಇದೆ, ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಂಘ್ವಿ, ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತ ಎನ್ನಲಾಗದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಸುಧೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.
The Karnataka High Court on Thursday completed its hearing on Chief Minister Siddaramaiah's petition challenging the legality of Governor Thaawarchand Gehlot's approval for his prosecution in the Mysuru Urban Development Authority (MUDA) case, and reserved its orders.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm