ಬ್ರೇಕಿಂಗ್ ನ್ಯೂಸ್
18-09-24 04:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ ನಮಗೆ ಆತಂಕವಿದೆ. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್ಕ್ರೈಬ್ ಮಾಡಿರುವುದನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು
ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲಾ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.
ಪಾಕ್ ಪರ ಘೋಷಣೆ ಬಗ್ಗೆ ಪರಿಶೀಲನೆ:
"ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದರು.

ಶಾಸಕ ಮುನಿರತ್ನ ಬಂಧನ ಪ್ರಕರಣ:
"ಶಾಸಕ ಮುನಿರತ್ನರನ್ನು ಏಕಾಏಕಿ ಬಂಧಿಸಿಲ್ಲ. ಅವರ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ" ಎಂದರು.
"ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ತಿಳಿಸಿದರು.
Home minister Dr G Parameshwar raises concern over pain killer tablets, says drug mafia in control in state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm