ಬ್ರೇಕಿಂಗ್ ನ್ಯೂಸ್
19-09-24 08:07 pm HK News Desk ಕರ್ನಾಟಕ
ಧಾರವಾಡ, ಸೆ.19: ಆ ಪಕ್ಷ ಈ ಪಕ್ಷ ಅಂತಲ್ಲ, ಎಲ್ಲ ಪಕ್ಷಗಳಿಂದಲೂ ಭ್ರಷ್ಟಾಚಾರ ಆಗ್ತಾ ಇದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕು. ಈ ರೀತಿ ಭ್ರಷ್ಟಾಚಾರ ನಡೆದರೆ ನಮ್ಮ ಆರ್ಥಿಕ ಪರಿಸ್ಥಿತಿ ಏನಾಗಬಹುದು. ಇದರಿಂದ ಕಷ್ಟ ಪಡುವವರು ಮಧ್ಯಮ ಮತ್ತು ಕೆಳವರ್ಗದವರು. ಹೀಗಾದರೆ ಪ್ರಜಾಪ್ರಭುತ್ವ ಉಳಿಯಲ್ಲ ಎನ್ನೋದು ನನ್ನ ಭಾವನೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಭ್ರಷ್ಟಾಚಾರ ಮಿತಿಮೀರಿದರೆ ದೊಡ್ಡ ಕ್ರಾಂತಿ ಆಗಬಹುದು, ಅದು ನಮಗೆ ಬೇಡ. ಹೀಗಾಗಿ ಭ್ರಷ್ಟಾಚಾರ ತಡೆಗಟ್ಟುವ ಕೆಲಸ ನಡೆಯಬೇಕು. ಅಭಿವೃದ್ಧಿ ಕೆಲಸ ಆಗುತ್ತಿವೆ, ಆದರೆ ಅದು ಸಾರ್ವಜನಿಕ ಹಿತಾಸಕ್ತಿಗಲ್ಲ. ರಾಜಕಾರಣಿಗಳು ತಮ್ಮ ಅಭಿವೃದ್ಧಿಯನ್ನಷ್ಟೆ ಮಾಡುತ್ತಿದ್ದಾರೆ. ಹಿಂದೆ ಇದ್ದ ಸರ್ಕಾರವನ್ನು ಇವತ್ತು ಅಧಿಕಾರದಲ್ಲಿರುವವರು ಶೇ.40 ಸರ್ಕಾರ ಎಂದು ಕರೆಯುತ್ತಿದ್ದರು. ಈಗ ಈ ಸರ್ಕಾರದಲ್ಲು ವಾಲ್ಮೀಕಿ ನಿಗಮದ ಹಗರಣ ನಡೆದಿದೆ. ಹೀಗಾಗಿ ಭ್ರಷ್ಟಾಚಾರ ಒಂದೇ ಪಕ್ಷಕ್ಕೆ ಸೀಮಿತವಲ್ಲ ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ರಾಜಕೀಯಕ್ಕೆ ಬರೋದು ಶ್ರೀಮಂತರಾಗುವುದಕ್ಕೆ ಎಂದು ಹೆಚ್ಚಿನವರು ತಿಳಿದುಕೊಂಡಿದ್ದಾರೆ.
ಇತ್ತೀಚೆಗೆ ಕೆಲ ಲೋಕಾಯುಕ್ತ ದಾಳಿ ನಡೆದಿವೆ. ಅದರ ಕಾರ್ಯವೈಖರಿ ಬಗ್ಗೆ ಜಾಸ್ತಿ ಮಾತಾಡುವುದಿಲ್ಲ. ಯಾರು ಆದರ್ಶಪ್ರಿಯರಾಗಬೇಕಿತ್ತೋ, ಅವರು ಈಗ ಜೈಲಿನಲ್ಲಿದ್ದಾರೆ. ಇದು ಯಾವ ಮಟ್ಟಕ್ಕೆ ಹೋಗಿದೆ. ದುರಾಸೆ ಕಡಿಮೆಯಾಗುವುದಿಲ್ಲ ಎಂಬುದನ್ನು ಇದು ತೋರಿಸಿಕೊಡುತ್ತದೆ ಎಂದು ಮುನಿರತ್ನ ಹೆಸರೇಳದೆ ಶಾಸಕರಾದವರು ಜೈಲಿಗೆ ಹೋಗುತ್ತಿರುವುದನ್ನು ಟೀಕಿಸಿದರು.
ಸಮಾಜದಲ್ಲಿ ದೊಡ್ಡ ಬದಲಾವಣೆ ಬರಬೇಕಿದೆ, ಆ ಬದಲಾವಣೆ ಮುಂದಿನ ಪೀಳಿಗೆಗೆ ಶಾಂತಿ, ಸೌಹಾರ್ದವನ್ನು ಬೆಳೆಸಿಕೊಡಬೇಕಿದೆ. ಮಕ್ಕಳು, ಮೊಮ್ಮಕ್ಕಳು ಸೌಹಾರ್ದತೆಯ ದಾರಿಯಲ್ಲಿ ನಡೆಯಬೇಕಿದೆ. ರಾಜಕೀಯಕ್ಕೆ ಬರುವುದಿದ್ದರೆ ಸೇವೆಗಾಗಿ ಬರಬೇಕು, ತಮ್ಮ ತಮ್ಮ ಲಾಭಕ್ಕಾಗಿ ಅಲ್ಲ. ರಾಜಕೀಯ ಎನ್ನುವುದು ಒಂದು ವ್ಯಕ್ತಿಯಲ್ಲ. ದೇಶ ಸೇವೆ ಮಾಡಲು ರಾಜಕೀಯಕ್ಕೆ ಬಂದವರನ್ನು ನಾವು ನೋಡಿದ್ದೇವೆ. ಅಂಥವರು ತಮ್ಮ ಲಾಭಕ್ಕಾಗಿ ರಾಜಕೀಯ ಮಾಡಿರಲಿಲ್ಲ. ಈಗ ರಾಜಕೀಯಕ್ಕೆ ಬರುವವರು ತಮ್ಮ ಲಾಭಕ್ಕಾಗಿ ಮಾತ್ರ ಬರುತ್ತಿದ್ದಾರೆ. ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ಆದರೆ ಆಗು ಹೋಗುಗಳು ಬೇರೆಯೇ ಇರುತ್ತವೆ ಎಂದು ಹೇಳಿದರು.
The former Lokayukta and Supreme Court judge Santosh Hegde has said that he has seen the disease of corruption in every political party and only a mass movement can prevent corruption.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm