ಬ್ರೇಕಿಂಗ್ ನ್ಯೂಸ್
23-09-24 07:46 pm HK News Desk ಕರ್ನಾಟಕ
ರಾಮನಗರ, ಸೆ 23: ಮಧ್ಯರಾತ್ರಿ ಇಬ್ಬರು ಯುವತಿಯರನ್ನು ಅಪಾರ್ಟ್ಮೆಂಟ್ಗೆ ಕರೆತಂದಿದ್ದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿಗೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ, ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ನಲ್ಲಿ ಇತ್ತೀಚೆಗೆ ನಡೆದಿದೆ.
ವರುಣ್ ಹಲ್ಲೆ ಮಾಡಿದ ಯುವಕ. ಪುನೀತ್ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಘಟನೆಗೆ ಸಂಬಂಧಿಸಿದಂತೆ, ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್.ಸಿ ಮಾಡಿಕೊಳ್ಳಲಾಗಿದೆ.
ವಕೀಲಿಕೆ ವೃತ್ತಿ ಪ್ರಾಕ್ಟೀಸ್ ಮಾಡುತ್ತಿರುವ ವರುಣ್, ಸೆ. 19ರಂ ತನ್ನ ಸ್ನೇಹಿತನೊಂದಿಗೆ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್ಗೆ ಇಬ್ಬರು ಯುವತಿಯರನ್ನು ರಾತ್ರಿ 12ರ ಸುಮಾರಿಗೆ ಕರೆ ತಂದಿದ್ದ. ಆಗ ಕರ್ತವ್ಯದಲ್ಲಿದ್ದ ಪುನೀತ್ ಅವರು, 12ರ ನಂತರ ಅಪರಿಚಿತರಿಗೆ ಅಪಾರ್ಟ್ಮೆಂಟ್ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್, ಪುನೀತ್ ಅವರ ಕೆನ್ನೆ ಮತ್ತು ತಲೆಗೆ ಹೊಡೆದಿದ್ದಾನೆ.
‘ನಾನ್ಯಾರು ಗೊತ್ತಾ? ಡಿಸಿಪಿ ಮಗ ಕಣಲೇ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ, ನಾಳೆ ಬೆಳಿಗ್ಗೆ ನೀನು ಇಲ್ಲಿ ಕೆಲಸಕ್ಕೆ ಇರ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿಸುತ್ತಾ ವರುಣ್ ಹಲ್ಲೆ ನಡೆಸುತ್ತಿರುವ ವಿಡಿಯೊವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದಾರೆ. ಅಲ್ಲದೆ, ಆತ ಅಪಾರ್ಟ್ಮೆಂಟ್ ಒಳಕ್ಕೆ ಯುವತಿಯರನ್ನು ಕರೆದೊಯ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿವೆ.
ಹಲ್ಲೆಯಿಂದಾಗಿ ಕಿವಿಗೆ ಗಾಯವಾಗಿದ್ದು, ಸರಿಯಾಗಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ನೀಡಿದ ದೂರಿನ ಮೇರೆಗೆ ಎನ್.ಸಿ ಮಾಡಿಕೊಳ್ಳಲಾಗಿದೆ. ಆರೋಪಿ ವರುಣ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#bengaluru ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ: ಸಿಎಂ ಸಂಬಂಧಿ ಎಂದು ಧಮ್ಕಿ; ಯುವಕ ಬಂಧನ #Siddaramaiah #kumbalagodu @XpressBengaluru @BlrCityPolice
— kannadaprabha (@KannadaPrabha) September 21, 2024
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು… pic.twitter.com/vHKd2xATiO
Bangalore cops file case as youth assaults guard, claims to be son of police DCP, CM relative. Karnataka police have slapped a case on a 21-year-old youth for assaulting a security guard of an apartment building for refusing entry to his friends in Bengaluru. Arrested youth has been identified as Varun.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm