ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm