ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm