ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm