ಬ್ರೇಕಿಂಗ್ ನ್ಯೂಸ್
27-09-24 05:07 pm HK News Desk ಕರ್ನಾಟಕ
ಬೆಂಗಳೂರು, ಸೆ.27: ಮುಡಾ ನಿವೇಶನ ಅಕ್ರಮ ಪ್ರಕರಣ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ಸಿದ್ದರಾಮಯ್ಯ ವಿರುದ್ಧ IPC 120B, 166, 403, 406, 420, 426, 465, 468, 340, 351 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ ನೀಡಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೆಕ್ಷನ್ 9 ಮತ್ತು 13 ರ ಅಡಿ ಕೇಸ್, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿತ್ತು. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಸೂಚಿಸಿತ್ತು. ಅದೇ ಪ್ರಕಾರ, ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ ವನ್ ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
Lokayukta police here on Friday registered a First Information Report (FIR) against Chief Minister Siddaramaiah and others in the Mysuru Urban Development Authority (MUDA) site allotment case, following the court order, official sources said.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 09:50 pm
Mangalore Correspondent
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm