ಬ್ರೇಕಿಂಗ್ ನ್ಯೂಸ್
27-09-24 06:19 pm HK News Desk ಕರ್ನಾಟಕ
ಹುಬ್ಬಳ್ಳಿ , ಸೆ 27: ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೋಲಿಸ್ ರಿಗೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದರೂ ಸಹ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದಿದ್ದೇ ಆದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಈ ಹಿಂದೆ ಬಹಳಷ್ಟು ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೇಯಾ ಎಂದು ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಅದನ್ನೇ ನಾವು ಈಗ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದಲ್ಲಿ ನ್ಯಾಯಾಲಯದ ತೀರ್ಪಿಗೆ ತಲೆ ಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಂದೆ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತಾದ ಮೇಲೆ ಪುನಃ ಸಿಎಂ ಆಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ. ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ? ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು. ಇಂಥವುದನ್ಸಂಸ್ಥೆಗಳ ಮುಚ್ಚಿಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಬಾಗಿಲ ಮೂಲಕ ಪ್ರಯತ್ನ ಮಾಡುತ್ತಿದೆ ಎಂದು ಅವರು ಇದೇ ವೇಳೆ ಆರೋಪಿಸಿದರು.
ರಾಜ್ಯದಲ್ಲಿ ಹೊಸ ಪ್ರಕರಣಗಳಲ್ಲಿ ಸಿಬಿಐ ತನಿಖೆ ಕೈಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಿರುವುದು ಸರಿಯಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸದನದಲ್ಲಿ ಕ್ಲೀನ್ ಚಿಟ್ ನೀಡಿದ್ದರು. ಇಡಿ, ಸಿಬಿಐ ತನಿಖೆ ನಾಗೇಂದ್ರ ಅವರು ತಪ್ಪಿತಸ್ಥರು ಎಂಬುದು ಬಹಿರಂಗಗೊಂಡಿದೆ. ಇದರಿಂದ ನಾಗೇಂದ್ರ ಬಳಿಕ ತಮ್ಮದೇ ಪಾಳಿ ಎಂದು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಕೈಗೊಂಡಿದೆ ಎಂದರು.
Bjp MLA Mahesh Tenginakai slams CM Siddaramaiah, says he must resign after FIR. If he's proved innocent in muda case then let him again be the CM of Karnataka he added.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm