ಬ್ರೇಕಿಂಗ್ ನ್ಯೂಸ್
27-09-24 06:19 pm HK News Desk ಕರ್ನಾಟಕ
ಹುಬ್ಬಳ್ಳಿ , ಸೆ 27: ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೋಲಿಸ್ ರಿಗೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದರೂ ಸಹ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದಿದ್ದೇ ಆದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಈ ಹಿಂದೆ ಬಹಳಷ್ಟು ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೇಯಾ ಎಂದು ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಅದನ್ನೇ ನಾವು ಈಗ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದಲ್ಲಿ ನ್ಯಾಯಾಲಯದ ತೀರ್ಪಿಗೆ ತಲೆ ಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಂದೆ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತಾದ ಮೇಲೆ ಪುನಃ ಸಿಎಂ ಆಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ. ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ? ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು. ಇಂಥವುದನ್ಸಂಸ್ಥೆಗಳ ಮುಚ್ಚಿಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಬಾಗಿಲ ಮೂಲಕ ಪ್ರಯತ್ನ ಮಾಡುತ್ತಿದೆ ಎಂದು ಅವರು ಇದೇ ವೇಳೆ ಆರೋಪಿಸಿದರು.
ರಾಜ್ಯದಲ್ಲಿ ಹೊಸ ಪ್ರಕರಣಗಳಲ್ಲಿ ಸಿಬಿಐ ತನಿಖೆ ಕೈಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಿರುವುದು ಸರಿಯಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸದನದಲ್ಲಿ ಕ್ಲೀನ್ ಚಿಟ್ ನೀಡಿದ್ದರು. ಇಡಿ, ಸಿಬಿಐ ತನಿಖೆ ನಾಗೇಂದ್ರ ಅವರು ತಪ್ಪಿತಸ್ಥರು ಎಂಬುದು ಬಹಿರಂಗಗೊಂಡಿದೆ. ಇದರಿಂದ ನಾಗೇಂದ್ರ ಬಳಿಕ ತಮ್ಮದೇ ಪಾಳಿ ಎಂದು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಕೈಗೊಂಡಿದೆ ಎಂದರು.
Bjp MLA Mahesh Tenginakai slams CM Siddaramaiah, says he must resign after FIR. If he's proved innocent in muda case then let him again be the CM of Karnataka he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm