ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm