ಬ್ರೇಕಿಂಗ್ ನ್ಯೂಸ್
28-09-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದಿದ್ದ, ಕಳೆದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಉದ್ಯಮಿಯೊಬ್ಬರನ್ನು ವಂಚಿಸಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಹಿಂದು ಸಂಘಟನೆಗಳ ಪರವಾಗಿ ಪ್ರಖರ ಭಾಷಣಕಾರರಾಗಿಯೂ ಗಮನ ಸೆಳೆದಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಉದ್ಯಮಿಯೊಬ್ಬರಿಂದ ಐದು ಕೋಟಿ ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು.
ಸೆಪ್ಟೆಂಬರ್ 29 ರಂದು ಬಿಗ್ ಬಾಸ್ ಸೀಸನ್ 11ರ ಪ್ರಸಾರ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ಮುಂದಾಗಿದೆ. ಈ ನಡುವೆ, ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ. ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ.
ರೀಲ್ಸ್ ಮೂಲಕ ಖ್ಯಾತಿ ಆಗಿರುವ ಭೂಮಿಕಾ ಬಸವರಾಜ್, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್, ‘ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, ನಟಿ ಭಾವನಾ ಮೆನನ್, ನಟಿ ಪ್ರೇಮಾ ಈ ಪ್ರೋಮೊದಲ್ಲಿ ಇದ್ದಾರೆ ಎಂದು ನೆಟ್ಟಿಗರು ಅಂದಾಜಿಸಿದ್ದಾರೆ.
Chaitra Kundapur, who was known as the Hindu firebrand of the coast, who cheated a businessman by saying that he would give him BJP ticket from Byndur during the last assembly election and went to jail, has entered the Bigg Boss house as a contestant in Bigg Boss season 11 this time.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm