ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm