ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm