ಬ್ರೇಕಿಂಗ್ ನ್ಯೂಸ್
01-10-24 11:19 am Bangalore Correspondent ಕರ್ನಾಟಕ
ಬೆಂಗಳೂರು, ಅ.1: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಇತ್ತ ಮುಖ್ಯಮಂತ್ರಿಗಳ ಪತ್ನಿ ವಿವಾದಕ್ಕೆ ಕಾರಣವಾದ 14 ಸೈಟ್ ಗಳನ್ನೇ ಸರ್ಕಾರಕ್ಕೆ ಹಿಂದಕ್ಕೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ತಮಗೆ ಹಂಚಿಕೆ ಮಾಡಲಾದ ಎಲ್ಲಾ 14 ಸೈಟ್ಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರ ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ನನಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಪಾರ್ವತಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ದೂರುದಾರ ಸ್ನೇಹಮಯಿ ಕೃಷ್ಣ ದೂರಿನಂತೆ, ಮುಡಾ ಹಗರಣ ಕುರಿತಾಗಿ ಜಾರಿ ನಿರ್ದೇಶನಾಲಯದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ಬೆನ್ನಲ್ಲೇ ಕಾನೂನು ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದು, ಇಡಿ ದಾಖಲಿಸಿರುವ ಇಸಿಐಆರ್ ಗೆ ತಡೆಯಾಜ್ಞೆ ಕೋರಿ ಮಂಗಳವಾರವೇ ಇ.ಡಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಗೌಪ್ಯ ಸ್ಥಳದಲ್ಲಿ ಆಪ್ತ ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಸಿದ್ದರಾಮಯ್ಯ ಸುದೀರ್ಘ ಸಮಾಲೋಚನೆ ನಡೆಸಿದರು. ಎಐಸಿಸಿ ವರಿಷ್ಠರನ್ನೂ ಸಂಪರ್ಕಿಸಿ ಸಲಹೆ ಪಡೆಯಲಾಗಿದ್ದು, ತಕ್ಷಣಕ್ಕೆ ಇಸಿಐಆರ್ಗೆ ಇ.ಡಿ. ವಿಶೇಷ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದಾರೆ.
Karnataka Chief Minister Siddaramaiah’s wife, BM Parvathi, in a letter to the Mysuru Urban Development Authority (MUDA) said she would return the land sites she had received from the authority. She said that she had never pursued any personal gain during her husband’s long political honour and no material possession could outweigh her husband’s clean image. The chief minister said that while he is surprised by her decision, he respects it.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm