ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm