ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm