ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm