ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am