ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm