ಬ್ರೇಕಿಂಗ್ ನ್ಯೂಸ್
01-10-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಅ 1: ಮುಖ್ಯಮಂತ್ರಿ ಮಾಡಲು 1,000 ಕೋಟಿ ಹಣ ಕೂಡಿಡಲಾಗಿದೆ ಎಂಬ ಯತ್ನಾಳ್ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ. 1,000 ಕೋಟಿ ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಪಿಎಂಎಲ್ಎ ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಇಸಿಐಆರ್ ದಾಖಲು ಕುರಿತು ಉಗ್ರಪ್ಪ ಪ್ರತಿಕ್ರಿಯಿಸಿ, ಬಿಜೆಪಿಯ ಯತ್ನಾಳ್ ಸಾವಿರ ಕೋಟಿ ಇಟ್ಟುಕೊಂಡಿದ್ದೇವೆ ಎಂದರು ಕ್ರಮವಾಗಿಲ್ಲ. ಬಿಜೆಪಿಯು ಏನೇ ಷಡ್ಯಂತ್ರ ಮಾಡಿದರೂ ಕಾನೂನು ಮೂಲಕ ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯ ಹಾಗೂ ಪಕ್ಷಕ್ಕೆ ಇದನ್ನು ಎದುರಿಸುವ ಶಕ್ತಿಯಿದೆ. ನೋಟಿಸ್ ಎಲ್ಲಾ ಮುಂದಿನ ಪ್ರಕ್ರಿಯೆ. ಅದರ ಬಗ್ಗೆ ನಾನು ಮಾತನಾಡಲ್ಲ. ಕಾನೂನು ಮೂಲಕ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ
ದಾವಣಗೆರೆಯಲ್ಲಿ ಮಾತನಾಡಿದ ಬಸವನಗೌಡ ಪಾಟೀಲ್ ಯತ್ನಾಳ್, 'ಮಹಾನ್' ನಾಯಕರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ ಎಂದು ಭಾನುವಾರ ಅಚ್ಚರಿಯ ಸಂಗತಿಯನ್ನ ಬಹಿರಂಗಪಡಿಸಿದ್ರು.
ಮಹಾನ್ ನಾಯಕ ಯಾರು ಎಂಬುದು ನಿಮಗೆ ಗೊತ್ತಿದೆ. ನಾನು ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಈ ಹಿಂದೆ ಅವರ ಮನೆಯಲ್ಲಿ ಕರೆನ್ಸಿ ನೋಟು ಎಣಿಸುವ ಯಂತ್ರ ಪತ್ತೆಯಾಗಿತ್ತು. ಅವರು ಡಿಸೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಹೇಳಿಕೆ ನೀಡಿದ್ರು.
ಇನ್ನು ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಯತ್ನಾಳ್ ಹೇಳಿಕೆ ಬಗ್ಗೆ ನಮಗೂ ಮಾಹಿತಿ ಇದೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆಯಿಂದ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ನಮ್ಮ ಸರ್ಕಾರವನ್ನು ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಎಲ್ಲದರ ಬಗ್ಗೆ ಆದಾಯ ತೆರಿಗೆ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿ. ಈ ಬಗ್ಗೆ ನಾವು ಕೂಡ ನಮ್ಮ ಲೀಗಲ್ ಟೀಂ ಜೊತೆ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
Yatnal slams DK Shivakumar of 100 crore rs deal to be next cm, congress file case against yatnal fr his remarks. DK Shivakumar also stated that let there be a income tax probe in this matter he added.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm