ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm