ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm