ಬ್ರೇಕಿಂಗ್ ನ್ಯೂಸ್
03-10-24 03:36 pm HK News Desk ಕರ್ನಾಟಕ
ಮೈಸೂರು, ಅ.3: ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದು ಆಮೂಲಕ ಸಿದ್ದರಾಮಯ್ಯ ವಿರುದ್ಧ ಬೀದಿಗಿಳಿದಿರುವ ಪಕ್ಷದ ನಾಯಕ, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧವೇ ಟಾಂಗ್ ನೀಡಿದ್ದಾರೆ. ಎಲ್ಲ ಸಿದ್ದರಾಮಯ್ಯ ಅವ್ರ ರಾಜೀನಾಮೆ ಕೇಳ್ತಿದ್ದಾರೆ. ತಾಕತ್ ಇದ್ರೆ ಎಫ್ಐಆರ್ ಆದವರೆಲ್ಲ ರಾಜೀನಾಮೆ ಕೊಡಿ. ಆಮೇಲೆ ಮಾತಾಡಿ ಎಂದು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಚಾಮುಂಡಿ ದೇವಿಯ ವರಪುತ್ರ. ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜಕೀಯ ಆರಂಭಿಸಿ ಇಲ್ಲಿಯವರೆಗೆ ಬೆಳೆದಿದ್ದಾರೆ. ಚಾಮುಂಡಿ ದೇವಿಯ ಆಶೀರ್ವಾದ ಮತ್ತು ಜನರ ಆಶೀರ್ವಾದದಿಂದ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಇಬ್ಬರು ಸೇರಿ ಅವರನ್ನು ಸೋಲಿಸಲು ಯತ್ನಿಸಿದೆವು. ಆದರೆ, ಚಾಮುಂಡಿ ಆಶೀರ್ವಾದದಿಂದ ಸಿದ್ದರಾಮಯ್ಯ ಅವತ್ತು ಗೆದ್ದರು. ಜೋಡೆತ್ತಿನ ರೀತಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದುಡಿದು ಸರಕಾರ ತಂದಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿದಾಗ, ಸಿಎಂ ಸಿದ್ದರಾಮಯ್ಯ ಫುಲ್ ಖುಷ್ ಆಗಿದ್ದಾರೆ.
ಮುಡಾ ಹಗರಣ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಪರವಾಗಿ ಜಿಟಿಡಿ ಬ್ಯಾಟ್ ಬೀಸಿದ್ದಾರೆ. ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡ್ಬೇಕು. ಎಫ್ಐಆರ್ ಆಗಿದೆ ಅಂತ ಕುಮಾರಸ್ವಾಮಿ ಈಗ ರಾಜೀನಾಮೆ ಕೊಡ್ತಾರಾ ? ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ - ಜೆಡಿಎಸ್ ದೋಸ್ತಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್ ಐ ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ಎಲ್ಲ ಮನೆಗೆ ಹೋಗಬೇಕು. ಹಾಗೇನಾದರೂ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ. ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ?ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆಯನ್ನು ಮೂರು ತಿಂಗಳು ಮಾಧ್ಯಮ ತೋರಿಸುತ್ತೆ. ಒಂದು ಎಫ್ ಐ ಆರ್ ಅನ್ನು ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯಾ? ಎಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ. ಬನ್ನಿ ನೋಡೋಣ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ? ಎಂದು ತನ್ನದೇ ಪಕ್ಷದ ನಾಯಕನಿಗೆ ಚಾಟಿ ಬೀಸಿದ್ದಾರೆ.
JD(S) MLA G.T. Deve Gowda has challenged the opposition leaders demanding Chief Minister Siddaramaiah's resignation. Speaking at the inauguration of the Mysuru Dasara celebrations at Chamundi Hills, Gowda questioned whether JD(S) leader H.D. Kumaraswamy and others facing cases would also step down.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm