ಬ್ರೇಕಿಂಗ್ ನ್ಯೂಸ್
04-10-24 12:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯ್ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
Vijay Tata, JD(S) social media vice president, has lodged a complaint against Union Minister HD Kumaraswamy and MLC Ramesh Gowda at Amruthahalli Police Station in Bengaluru, reported ANI. He alleged that they demanded ₹50 Crores from him and issued life threats. The JD(S) leader also sought police protection in the wake of threats mentioned in his complaint.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm