ಬ್ರೇಕಿಂಗ್ ನ್ಯೂಸ್
04-10-24 09:18 pm HK News Desk ಕರ್ನಾಟಕ
ಬಳ್ಳಾರಿ, ಅ.04: ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಮಾನ, ಮರ್ಯಾದೆ ಇಲ್ಲದ ರಾಜಕಾರಣಿ. ನೀಚ ರಾಜಕಾರಣದ ಪರಮಾವಧಿಯನ್ನು ಸಿದ್ದರಾಮಯ್ಯ ಮೀರಿದ್ದಾರೆ. ಬಳ್ಳಾರಿ ಜನರ ಶಾಪದಿಂದ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ, ಸಿಎಂ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
"ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಮಾಡಿದ ಒಂದು ಕರೆಗೆ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದು ನನ್ನ ಬಗ್ಗೆ ಏನೆಲ್ಲಾ ಕೆಟ್ಟದನ್ನು ಮಾತಾನಾಡಿದರು. ಈಗ ಅವರು ಅನುಭವಿಸುತ್ತಿದ್ದಾರೆ, ಕರ್ಮ ಎನ್ನುವುದು ಯಾರನ್ನೂ ಬಿಡುವುದಿಲ್ಲ" ಎಂದು ಜನಾರ್ಧನ ರೆಡ್ಡಿ, ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.
ಗಣಿ ಉದ್ಯಮಿಯೂ ಆಗಿರುವ ಜನಾರ್ಧನ ರೆಡ್ಡಿ, ಬಹುಕೋಟಿ ಹಗರಣವೊಂದರಲ್ಲಿ ಸೆಪ್ಟಂಬರ್ 2011ರಂದು ಬಂಧನಕ್ಕೆ ಒಳಗಾಗಿದ್ದರು. ಜೊತೆಗೆ, ಬಳ್ಳಾರಿ, ಅನಂತಪುರ, ಕರ್ನೂಲ್ ಜಿಲ್ಲೆ ಪ್ರವೇಶಿಸದಂತೇ ನಿರ್ಬಂಧವನ್ನೂ ಹೇರಲಾಗಿತ್ತು. ಈಗ, ಸರ್ವೋಚ್ಚ ನ್ಯಾಯಾಲಯ ಈ ನಿರ್ಬಂಧವನ್ನು ತೆರವುಗೊಳಿಸಿದೆ
ಬಳ್ಳಾರಿಗೆ ನಿರ್ಬಂಧ ಹೇರಿದ್ದರೂ, ಅಲ್ಲಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ, ಅಕ್ಕಿ ಉತ್ಪಾದನೆಯಲ್ಲಿ ಕಲ್ಯಾಣ ಕರ್ನಾಟಕದ ಪ್ರಮುಖ ನಗರ ಗಂಗಾವತಿ ಅಸೆಂಬ್ಲಿ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಹೊಸ ಪಾರ್ಟಿಯನ್ನು (ಕಲ್ಯಾಣ ರಾಜ್ಯ ಪ್ರಗತಿ ಪಕ್ಷ) ಕಟ್ಟಿ, ವಿಜೇತರಾಗಿದ್ದರು.
ಸಿದ್ದರಾಮಯ್ಯ ಊರು ಬಿಡುವಂತ ಸಮಯ ಸದ್ಯದಲ್ಲೇ ಬರಲಿದೆ ;
ಹೆಲಿಕಾಪ್ಟರ್ ಖರೀದಿಸಿದ್ದಕ್ಕೆ ಸಿದ್ದರಾಮಯ್ಯ ನನ್ನನ್ನು ಖಳನಾಯಕನಂತೆ ಬಿಂಬಿಸಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ, ಕರ್ಮ ಎನ್ನುವುದು ಯಾರನ್ನೂ ಬಿಡುವುದಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ. ನನ್ನ ಊರಿಗೆ ನಾನು ಬಂದಿದ್ದೇನೆ, ಅವರ ಊರನ್ನು ಅವರು ಬಿಡುವಂತಹ ಸಮಯ ಸದ್ಯದಲ್ಲೇ ಬರಲಿದೆ ಎಂದು ಜನಾರ್ಧನ ರೆಡ್ಡಿ, ಸಿಎಂ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
Mining baron and BJP MLA Gali Janardhan Reddy Thursday entered his hometown of Ballari after 14 years, holding a roadshow to mark his return. The Supreme Court had barred Reddy from entering Ballari after his arrest in 2011 over illegal export of iron ore, estimated to be worth more than Rs 12,000 crore. The court had recently lifted the ban.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm