ಬ್ರೇಕಿಂಗ್ ನ್ಯೂಸ್
07-10-24 09:41 pm HK News Desk ಕರ್ನಾಟಕ
ಬೆಂಗಳೂರು, ಅ.7: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಜೋರಾಗಿರುವ ನಡುವೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಕುತೂಹಲದ ಕೇಂದ್ರವಾಗಿ ಬದಲಾಗಿದೆ. ಡಿ.ಕೆ. ಸುರೇಶ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಕೆರಳಿಸಿದೆ.
ಈವರೆಗೂ ಕಾಂಗ್ರೆಸ್ ನಾಯಕರು ಜಾರಕಿಹೊಳಿ ಅವರನ್ನು ಭೇಟಿ ಮಾಡುತ್ತಿದ್ದರು. ಈಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿಯಿತ್ತು ಮಾತುಕತೆ ನಡೆಸಿರುವುದು ರಾಜಕೀಯದಲ್ಲಿ ನಾನಾ ಅರ್ಥಗಳನ್ನು ಕಲ್ಪಿಸಿದೆ. ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು ಎನ್ನುವ ಸೂಚನೆಗಳಿವು ಎಂದು ಹೇಳಿದರು.


ಆದರೆ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರೈತರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿರುವ ಶಿಕಾರಿಪುರ ಕ್ಷೇತ್ರದ ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ಗಳನ್ನು ಸ್ಥಳಾಂತರಿಸುವಂತೆ ಒತ್ತಾಯ ಮಾಡಿದ್ದೇನೆ, ಅದು ಬಿಟ್ಟರೆ ಬೇರಾವ ಚರ್ಚೆಯೂ ನಡೆದಿಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜಿನಾಮೆ ಬಗ್ಗೆ ಒತ್ತಾಯ ಕೇಳಿಬರುತ್ತಿರುವ ಹೊತ್ತಿನಲ್ಲಿ ದಲಿತ ವರ್ಗದ ಸಚಿವರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಇದಲ್ಲದೆ, ಸಿದ್ದರಾಮಯ್ಯ ಬದಲಾದರೆ ಮುಂದಿನ ಮುಖ್ಯಮಂತ್ರಿ ದಲಿತ ವರ್ಗದವರೇ ಆಗಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯರನ್ನು ಭೇಟಿ ಮಾಡಿ ಬಂದ ಬೆನ್ನಲ್ಲೇ ಬೆಳಗಾವಿ ಸಾಹುಕಾರ್ ಮನೆ ಪವರ್ ಸೆಂಟರ್ ಆಗಿ ಬದಲಾಗಿದೆ.
ಇತ್ತ ಸಚಿವರು, ಶಾಸಕರು ಜಾರಕಿಹೊಳಿ ಮನೆಯತ್ತ ಸಾಲುಗಟ್ಟಿ ನಿಲ್ಲುತ್ತಿದ್ದರೆ ಮುಂದಿನ ಸಿಎಂ ಸ್ಥಾನಕ್ಕೆ ಟವೆಲ್ ಹಾಕಿರುವ ಡಿಕೆಶಿ ಪರವಾಗಿ ತಮ್ಮ ಡಿಕೆ ಸುರೇಶ್ ಕೂಡ ಭೇಟಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಸರಕಾರವನ್ನು ಬೀಳಿಸಲು ರಮೇಶ್ ಜಾರಕಿಹೊಳಿ ಕಾರಣವಾಗಿದ್ದರು. ಬೆಳಗಾವಿ ಸಾಹುಕಾರ್ ನೇತೃತ್ವದಲ್ಲೇ ಸರ್ಕಾರ ಪತನವಾಗಿತ್ತು. ಈಗ ಮತ್ತೆ ಬೆಳಗಾವಿ ಸಾಹುಕಾರ್ ರಾಜಕೀಯದ ಪವರ್ ಪಾಯಿಂಟ್ ಆಗಿರುವುದು ರಾಜಕೀಯ ಕಣ ಕುತೂಹಲ ಕೆರಳಿಸಿದೆ.
Karnataka BJP president B Y Vijayendra and Public Works Department (PWD) Minister Satish Jarkiholi met on Monday, causing a stir within the state’s political circles. Both leaders, however, said the meeting had no political significance.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm