ಬ್ರೇಕಿಂಗ್ ನ್ಯೂಸ್
08-10-24 10:08 pm HK News Desk ಕರ್ನಾಟಕ
ರಾಯಚೂರು, ಅ.8: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲೆಯ ಸಿಂಧನೂರು ನಗರದಲ್ಲಿಂದು ದಸರಾ ಉತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಇರುತ್ತದೆ. ಸಿಎಂ ಮುಂದುವರೆಯುತ್ತಾರೆ ಎಂದರು.
ಇದೇ ವೇಳೆ, ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಯಾಣದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸವಿತ್ತು. ಜನ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಎಲ್ಲಿ ಎಡವಿದ್ದೀವಿ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು.
ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಮೇಲೆ ನಮಗೆ ವಿಶ್ವಾಸವಿತ್ತು. ಹರಿಯಾಣದಲ್ಲಿ ನಾವು ಗೆಲ್ಲಬೇಕಾಗಿತ್ತು. ಆದರೆ ಮತದಾರರ ತೀರ್ಪೇ ಅಂತಿಮ. ಹರಿಯಾಣದಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಕುರಿತು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ನಾವು ಈಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.
ಇನ್ನು, ಎಕ್ಸಿಟ್ ಪೋಲನ್ನು ನಾನು ಯಾವತ್ತುೂ ನಂಬಿಲ್ಲ, ಮುಂದೆಯೂ ನಂಬಲ್ಲ ಎಂದು ತಿಳಿಸಿದರು. ಇದೇ ವೇಳೆ, ರಾಜ್ಯದಲ್ಲಿನ ಮೂರು ಉಪಚುನಾವಣೆ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಫೈನಲ್ ಮಾಡುತ್ತೇವೆ ಎಂದು ಹೇಳಿದರು.
Deputy Chief Minister DK Shivakumar said that there will be no change of Chief Minister in the state. He was speaking to reporters after inaugurating Raita Dasara on the occasion of Dussehra festival in Sindhanur city of the district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm