ಬ್ರೇಕಿಂಗ್ ನ್ಯೂಸ್
09-10-24 04:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋ ಕೊಡುವುದಾಗಿ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತ ಮಹಿಳೆ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ನೀಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರ ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಅದೇ ರೀತಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ದರ್ಜೆಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ಮಾಡಿಟ್ಟಿದ್ದಾರೆ. ಬೇಕಿದ್ದರೆ ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ, ಆರ್. ಅಶೋಕ್ ಗೆ ಸಂತ್ರಸ್ತ ಮಹಿಳೆ ಸವಾಲು ಹಾಕಿದ್ದಾರೆ.

ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ. ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದ ಐದಾರು ಸಂತ್ರಸ್ತ ಮಹಿಳೆಯರು ಹೆದರಿ ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರದ್ದು 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತನಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲಾ ಎಂದು ಅವರನ್ನು ಕೇಳಬೇಕಿದೆ ಎಂದು ಹೇಳಿದ್ದಾರೆ.
MLA Munirathna honey trap case, many Mla and police officers trapped blackmailed of sex videos says victim harrassed by MLA. Munirathna has Blackmailed several higher police officers and MLA's she alleged.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm