ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm