ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm