ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm