ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm