ಬ್ರೇಕಿಂಗ್ ನ್ಯೂಸ್
14-10-24 08:51 pm Bangalore Correspondent ಕರ್ನಾಟಕ
ಬೆಂಗಳೂರು, ಅ.14: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A-2 ಆರೋಪಿ ಹಾಗೂ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಪೋಲಿಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರೆ, ತನಿಖಾಧಿಕಾರಿಗಳ ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಿಸಿದ್ದರು. ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲದ ನ್ಯಾ.ಜೈಶಂಕರ್ ಅವರು ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿ ಅ.10ರಂದು ಆದೇಶ ಹೊರಡಿಸಿದ್ದರು.
ಪ್ರಕರಣದಲ್ಲಿ ತಮ್ಮ ಕಕ್ಷಿದಾರ ದರ್ಶನ್ ಪರ ಪೊಲೀಸರು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ. ಮಾಧ್ಯಮಗಳ ವರದಿಗಳಿಂದ ತನಿಖಾಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ತನಿಖೆ ಮಾಡಿದಂತಿದೆ. ಮಹಜರು ಪ್ರಕ್ರಿಯೆ, ಸ್ವಇಚ್ಚಾ ಹೇಳಿಕೆ, ತಡವಾಗಿ ಸಾಕ್ಷಿಗಳ ಹೇಳಿಕೆ ಪಡೆಯುವುದು, ಸಾಕ್ಷಿಗಳ ಸಂಗ್ರಹದಲ್ಲಿ ವಿಳಂಬ, FSL ವರದಿಗಳಲ್ಲಿನ ಲೋಪ, ತನಿಖೆಯ ಪ್ರತಿ ಹಂತಗಳಲ್ಲೂ IOs (ತನಿಖಾಧಿಕಾರಿಗಳು) ಎಡವಿದ್ದಾರೆ ಎಂದು ವಾದ ಸಲ್ಲಿಕೆಯಾಗಿತ್ತು.
ದರ್ಶನ್ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆದಿದೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಚಾಟಿಂಗ್ ಮಾಡಿದ ವಿಚಾರ ದರ್ಶನ್ಗೆ ಗೊತ್ತಿರಲಿಲ್ಲ. ಅವರ ಚಾಟಿಂಗ್ ವೇಳೆ ದರ್ಶನ್ ಕಾಶ್ಮೀರದ ಪ್ರವಾಸದಲ್ಲಿದ್ದರು. ಅಪಹರಣ ಮತ್ತು ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ. ಇದೊಂದು ಕೆಟ್ಟ ತನಿಖಾ ವರದಿ ಎಂದು ಸಿ.ವಿ.ನಾಗೇಶ್ ಅವರು ಕೋರ್ಟ್ ಮುಂದೆ ಪೊಲೀಸರು ಲೋಪ ದೋಷಗಳ ಎಂದು ವಾದಿಸಿದ್ದರು.
ಇದಕ್ಕೆ ಪ್ರಬಲವಾಗಿ ವಿರೋಧಿಸಿದ್ದ ಎಸ್ಪಿಪಿ ಪ್ರಸನ್ನಕುಮಾರ್, ಪೊಲೀಸರು ಕೊಲೆಗೆ ಸಂಬಂಧಿಸಿ ಎಲ್ಲಾ ಟೆಕ್ನಿಕಲ್ ಸಾಕ್ಷಿಗಳನ್ನೂ ಕಲೆ ಹಾಕಿಯೇ ತನಿಖೆ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ, ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆ ತಂದು ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದರ್ಶನ್ ಮತ್ತವರ ಆಪ್ತೆ ಪವಿತ್ರಾಗೌಡ, ಇನ್ನಿತರ ಆರೋಪಿಗಳು ಭಾಗಿದಾರಿಗಳು ಎಂದು ವಾದಿಸಿದ್ದರು.
A lower court in Bengaluru on Monday rejected the bail applications of actor Darshan Thoogudeepa and his close friend Pavithra Gowda in the Renukaswamy murder case.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm