ಬ್ರೇಕಿಂಗ್ ನ್ಯೂಸ್
17-10-24 05:29 pm HK News Desk ಕರ್ನಾಟಕ
ವಿಜಯಪುರ, ಅ 18: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ್ದ ದಾರುಣ ಘಟನೆ ನಗರದ ಬಡಿಕಮಾನ್ ರಸ್ತೆಯ ಬಳಿ ನಡೆದಿದೆ.
ಮೃತ ಮಗುವನ್ನು 2 ವರ್ಷದ ಯಾಸೀನ್ ಸದ್ದಾಂ ಮುಲ್ಲಾ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯವರು ಚರಂಡಿಯ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಇದರಿಂದಾಗಿ ಮಂಗಳವಾರ ಅ.15 ಸಂಜೆ ಮಗು ಚರಂಡಿಗೆ ಬಿದ್ದು ಸಾವನ್ನಪ್ಪಿದೆ. ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.


ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಒಳಚರಂಡಿ ಕಾಮಗಾರಿ ಆರಂಭವಾಗಿ ಆರು ತಿಂಗಳು ಕಳೆದಿದೆ. ಗುತ್ತಿಗೆದಾರರು ಕಾಮಗಾರಿಯ ಬಗ್ಗೆ ಕಾಳಜಿ ವಹಿಸಿಲ್ಲ. ಕೊಳಚೆ ನೀರಿನ ಚರಂಡಿಗೆ ಸ್ಲ್ಯಾಬ್ ಹಾಕದ ಕಾರಣ, ಶಿಶು ಜೀವ ಕಳೆದುಕೊಂಡಂತಾಗಿದೆ, ನಗರ ಶಾಸಕರು ಸೌಜನ್ಯಕ್ಕೂ ಈ ಭಾಗಕ್ಕೆ ಭೇಟಿ ನೀಡಿಲ್ಲ ಎಂದು ದೂರಿದರು.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರತಿಭಟನಾ ಸ್ಥಳಕ್ಕೆ ಧಾವಿಸಿದರು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ವಿಫಲವಾಗಿರುವ ಪಾಲಿಕೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವೈಯಕ್ತಿಕವಾಗಿ ₹2ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಉಪ ಮೇಯರ್ ದಿನೇಶ ಹಳ್ಳಿ ಮಾತನಾಡಿ, ‘ನೊಂದ ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದಲೂ ₹2ಲಕ್ಷ ಪರಿಹಾರ ಧನ ನೀಡಲಾಗುವುದು’ ಎಂದರು.
ಸ್ಥಳೀಯ ಮುಖಂಡ ರಫೀಕ್ ಅಹ್ಮದ್ ಖಾಣೆ ಮಾತನಾಡಿ, ‘ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಲ್ಲಿನ ನಿವಾಸಿಗಳು ಒತ್ತಾಯಿಸಿ ಆರು ತಿಂಗಳಾಗುತ್ತಾ ಬಂದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ವಾರ್ಡ್ ಪ್ರತಿನಿಧಿಸುವ ಸದಸ್ಯೆ ಕೂಡ ಅನೇಕ ಬಾರಿ ಪತ್ರ ಮುಖೇನ, ಮೌಖಿಕವಾಗಿಯೂ ವಿನಂತಿ ಮಾಡಿಕೊಂಡರೂ ಪ್ರಯೋಜನಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
ಮುಗಿಲು ಮುಟ್ಟಿದ ಆಕ್ರಂದನ ;
ಬದುಕನ್ನು ನೋಡಲು ಆಗಷ್ಟೇ ಆರಂಭಿಸಿದ ಎರಡು ವರ್ಷದ ಕಂದಮ್ಮನನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಕಸ ತುಂಬಿದ ಚರಂಡಿಯಲ್ಲಿ ಬಾಲಕನ ಮೃತದೇಹ ಹೊರತಗೆಯುತ್ತಿದ್ದಂತೆ ಹೆತ್ತ ಕರುಳಿನ ಆಕ್ರಂದನ ನೋಡಿ ನೆರೆ ಹೊರೆಯವರ ಕಣ್ಣೀರಾದರು.
Two year old baby falls into pit, dies at vijyapur. Family alleges total negligence of city corporation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm