ಬ್ರೇಕಿಂಗ್ ನ್ಯೂಸ್
18-10-24 04:12 pm HK News Desk ಕರ್ನಾಟಕ
ಬಳ್ಳಾರಿ, ಅ 18: ಸಂಡೂರು ವಿಧಾನಸಭೆಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ. ನಾಗೇಂದ್ರ ನಡುವಿನ ವಾಕ್ಸಮರ ಹೆಚ್ಚಾಗಿದೆ. ಇಬ್ಬರ ನಡುವೆ ಮಾತಿನ ಕೌಂಟರ್ ಗಳು ಮುಂದುವರದಿದ್ದು, “ನಾಗೇಂದ್ರ ನಿನ್ನೆ ದಿನ ಕಣ್ಣೀರು ಹಾಕಿದ್ದಾರೆ. ನಾಗೇಂದ್ರ ಹಾಕಿದ ಕಣ್ಣೀರು ಪಶ್ಚಾತ್ತಾಪದ ಕಣ್ಣೀರು. ರಾಜಕೀಯವಾಗಿ ನಾಗೇಂದ್ರರನ್ನು ಬೆಳೆಸಿದ್ದು ನಾವೇ ಇಂತವರನ್ನು ನಾವು ಬೆಳಿಸಿದ್ದೇವಾ ಎಂದು ಪಶ್ಚಾತ್ತಾಪ ಪಟ್ಟುಕೊಳ್ಳುತ್ತಿದ್ದೇವೆ” ಎಂದು ರೆಡ್ಡಿ ಹೇಳಿದ್ದಾರೆ.
ಸಂಡೂರಿನಲ್ಲಿ ಗೃಹ ಪ್ರವೇಶ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ, ಸರ್ಕಾರದ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ನಾಗೇಂದ್ರ ವಂಚನೆ ಮಾಡಿದ್ದನ್ನು ಕಿರುಪುಸ್ತಕ ಮಾಡಿ ಹಂಚುತ್ತೇನೆ. ಚಾರ್ಜ್ ಶೀಟ್ ಅಂಶಗಳನ್ನು ಎರಡು ಮೂರು ದಿನದಲ್ಲಿ ಬುಕ್ ಲೆಟ್ ಮಾಡಿ ಬಿಡುಗಡೆ ಮಾಡುತ್ತೇನೆ ಎಂದರು.
ಸಂಡೂರಿನಲ್ಲಿ ಪ್ರಚಾರಕ್ಕೆ ನಾಗೇಂದ್ರ ಬರುತ್ತಾರೋ, ಸೋನಿಯಾ ಗಾಂಧಿ ಬರುತ್ತಾರೋ ಗೊತ್ತಿಲ್ಲ. ಸಂಡೂರಿನಲ್ಲಿ ತುಕಾರಾಂ ಏನೂ ಅಭಿವೃದ್ಧಿ ಮಾಡಿಲ್ಲ. ನಾಗೇಂದ್ರನ ಬಗ್ಗೆ ಮಾತನಾಡುವುದು ತಪ್ಪು. ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿರುವವನು. ನಾಗೇಂದ್ರನನ್ನು ಕಾಂಗ್ರೆಸ್ ಸಂಪೂರ್ಣ ಬಳಕೆ ಮಾಡಿಕೊಂಡಿದೆ. ಮಾಡಿದ ಪಾಪಕ್ಕೆ ಪಶ್ಚಾತ್ತಾಪ ಕಾಡುತ್ತಿದೆ, ಹೀಗಾಗಿ ಕಣ್ಣೀರು ಹಾಕಿದ್ದಾನೆ ಎಂದು ಹೇಳಿದರು.
ಸರ್ಕಾರಿ ಮೌಕರ ಆತ್ಮಹತ್ಯೆ ಮಾಡಿಕೊಂಡಾಗ ಸತ್ಯ ಹೊರಬಂತು. ಸುಳ್ಳು ಹೇಳಿದ್ದರೆ ಅಧಿಕಾರಿ ಸಾಯುತ್ತಿರಲಿಲ್ಲ, ಸತ್ಯ ಹೇಳಿ ಸತ್ತು ಹೋಗಿದ್ದಾನೆ. ಗೋವಾಕ್ಕೆ ಕರೆದೊಯ್ದು ವಿಡಿಯೋ ಮಾಡಿಸಿ ಹೆದರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಂದ್ರ ಏನೇ ಮಾತಾಡಿದರೂ ನಂಬುವ ಸ್ಥಿತಿಯಲ್ಲಿ ಜನ ಇಲ್ಲ. ನಾಗೇಂದ್ರ ಮಾಡಿದ ಹಗರಣ ಕುರಿತು ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ರೆಡ್ಡಿ ಹೇಳಿದರು.
Reacting sharply to the former Minister B. Nagendra’s statement that mining baron G. Jarandhan Reddy was arrested by the Central Bureau of Investigation (CBI) on the directions of the BJP, Mr. Reddy warned the former not to play smart and blame BJP for his arrest.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 01:50 pm
HK News Desk
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm